ಕೊಡುಗು: ಕಾಫಿ ನಾಡು ಕೊಡುಗಿನಲ್ಲೀಗ ಕಾಫಿ ಬೆಳೆಗಾರರು ಹಾಗೂ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್ ಡೌನ್ ಪರಿಣಾಮದಿಂದ ಕಾಫಿ ಉದ್ಯಮದ ವಹಿವಾಟು ಸ್ಥಗಿತವಾಗಿದ್ದು, ಸಾವಿರಾರು ಬೆಳೆಗಾರರು ಹಾಗೂ ಕಾಫಿ ಉದ್ಯಮವನ್ನೆ ನಂಬಿಕೊಂಡ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಇಲ್ಲಿನ ಕುಶಾಲನಗರದ ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ 35ಕ್ಕೂ ಹೆಚ್ಚು ಕಾಫಿ ಉದ್ಯಮಕ್ಕೆ ಸಂಬಮಧಿಸಿದ ಕೈಗಾರಿಕೆಗಳಿವೆ. ರಾಜ್ಯದಲ್ಲಿ ಹೆಚ್ಚು ಕಾಫಿ ಉತ್ಪಾದನೆ ಆಗುವುದೇ ಕೊಡುಗಿನಲ್ಲಿ. ಆದರೆ ಇದಿಗ ಲಾಕ್ ಡೌನ್ ಹಿನ್ನೆಲೆ ಸಾಗಣೆ ಮತ್ತು ರಫ್ತು ಅಸಾಧ್ಯವಾಗಿದೆ. ಸರ್ಕಾರ ಈಗಾಗಲೇ ಸಗಟು ಸಾಗಣೆಗೆ ವಿನಾಯಿತಿ ನೀಡಿದರೂ ಕೂಡ ಈ ಕಾಫಿ ಉದ್ಯಮಕ್ಕೆ ಅದರದ್ದೆ ಆದ ಕೆಲವು ಮಿತಿಗಳಿರುವುದರಿಂದಾಗಿ ರಫ್ತು ಸಾಧ್ಯವಾಗುತ್ತಿಲ್ಲ.

ಕಾಫಿಗೆ ಸಂಬಂಧಿಸಿದ ಉದ್ಯಮಗಳಿಂದಲೇ ಜಿಲ್ಲೆಯಲ್ಲಿ ವಾರ್ಷಿಕ 4 ಸಾವಿರ ಕೋಟಿ ವಹಿವಾಟು ನಡೆಯುತ್ತದೆ. ಆದರೆ ಬಹುತೇಕ ಕೈಗಾರಿಕೆಗಳು ಬಂದ್ ಆಗಿರುವುದರಿಂದ ಟಷ್ಟು ಹಾನಿಯಾಗಲಿದೆ ಎನ್ನುವ ಲೆಕ್ಕಾಚಾರವೇ ಊಹೆ ನಿಲುಕದ್ದಾಗಿದೆ. ಒಂದೆಡೆ ಕೈಗಾರಿಕೆ ಬಂದ್ ಆಗಿರುವದರಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾದರೆ ಮತ್ತೊಂದೆಡೆ ಕೊಡಗು ಜಿಲ್ಲೆಯ ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಗಳಿಂದ ಕೆಲಸಕ್ಕೆ ಬರುತ್ತಿದ್ದ ಕಾರ್ಮಿಕರಿಗೆ ಕೆಲಸಕ್ಕೆ ಬರುವುದು ಅಸಾಧ್ಯವಾಗಿದೆ.

2500 ಕಾರ್ಮಿಕರು

ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪ ಕೂಡ್ಲೂರಿನಲ್ಲಿ ಕೈಗಾರಿಕೆಯಲ್ಲಿ ಕಾಫಿ ಉದ್ಯಮವನ್ನೆ ನಂಬಿಕೊಂಡು 2500 ಕಾರ್ಮಿಕರಿದ್ದಾರೆ. ಆದರೆ ಇದೀಗ ಉದ್ಯಮ ಸ್ಥಗಿತವಾಗಿರುವುದರಿಂದ ಕಾರ್ಮಿಕ ಕುಟುಂಬಳ ಸ್ಥಿತಿ ಹೇಳತೀರದಾಗಿದೆ. ಇದರ ಜೊತೆಗೆ ಕಾಫಿ ಉದ್ಯಮಕ್ಕೂ ಕೂಡ ಅಪಾರಪ್ರಮಾಣದ ಹಾನಿಯಾಗಿದೆ. ಇಂತಹ ಅದೆಷ್ಟೋ ಉದ್ಯಮಗಳಿಗೆ ಭಾರಿ ಪೆಟ್ಟು ಬಿದ್ದಿದೆ. ಇದರಿಂದಾಗಿ ಆರ್ಥಿಕ ಸ್ಥಿತಿ ಕುಸಿತ ಕಾಣುತ್ತಲೇ ಸಾಗಿದೆ. ದುಡಿಯವ ವರ್ಗದ ಪರಿಸ್ಥಿತಿಯಂತೂ ಹೇಳತೀರದಂತಾಗಿದೆ.

1 comment
  1. ಕೊರೋನಾ ಎಲ್ಲವನ್ನೂ ಕಟ್ಟಿ ಹಾಕುತ್ತಿದೆ…. ಸರ್ಕಾರ ಈ ಕುರಿತು ಶೀಘ್ರವಾಗಿ ಕೆಲವು Rapid Action ಗಳನ್ನು ಕಂಡುಕೊಳ್ಳಬೇಕಿದೆ.

Leave a Reply

Your email address will not be published. Required fields are marked *

You May Also Like

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ

ಮೋದಿ ಸರ್ಕಾರಕ್ಕೆ ಒಂದು ವರ್ಷ: ದೇಶವಾಸಿಗಳಿಗೆ ಪ್ರಧಾನಿ ಪತ್ರ

ಕೇಂದ್ರದ ನರೇಂದ್ರ ಮೋದಿ ನರೆತೃತ್ವದ ಸರ್ಕಾರ ಒಂದು ವರ್ಷ ಅವಧಿ ಪೂರ್ಣಗೊಳಿಸಿದೆ. ಈ ಹಿನ್ನೆಲೆ ಪ್ರಧಾನಿ…