ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆಯನ್ನು ಟ್ಯಾಕ್ಟರ್ ನಿಂದ ನಾಶ ಮಾಡಿದ್ದಾರೆ.

ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ನಾಗೇನಹಳ್ಳಿ ಅಗ್ರಹಾರ ತಾಂಡಾದಲ್ಲಿ ಕಿರಣ್ ಎಂಬ ರೈತ ಎರಡು ಎಕರೆ ಜಮೀನಿನಲ್ಲಿ ಎಲೆಕೋಸನ್ನು ಬೆಳೆದಿದ್ದರು. ಎರಡು ಎಕರೆ ಎಲೆಕೋಸನ್ನು ಬೆಳೆಯಲು ಸುಮಾರು ಒಂದೂವರೆ ಲಕ್ಷ ರೂಪಾಯಿ ಹಣ ಖರ್ಚು ಮಾಡಿದ್ದರು. ಆದರೆ, ಫಸಲು ಕೂಡ ಉತ್ತಮವಾಗಿತ್ತು. ಎರಡರಿಂದ ಮೂರು ಲಕ್ಷ ಲಾಭದ ನಿರೀಕ್ಷೆ ರೈತನದ್ದಾಗಿತ್ತು. ಆದರೆ ಬೆಳೆ ಕೊಳ್ಳಲು ಯಾರೂ ಮುಂದೆ ಬರದೆ, ದಿನದಿಂದ ದಿನಕ್ಕೆ ಬೆಳೆ ಹಾಳಾಗಿರುವುದನ್ನು ಕಂಡು ಮನನೊಂದ ರೈತ ಕಿರಣ್ ಎರಡು ಎಕರೆಗೂ ಟ್ರ್ಯಾಕ್ಟರ್ ಹೊಡೆಸಿ ಬೆಳೆ ನಾಶ ಮಾಡಿದ್ದಾರೆ.

ಕೊರೊನಾ ಆತಂಕದಿಂದ ದೇಶದಲ್ಲಿ ಲಾಕ್ಡೌನ್ ಜಾರಿ ಮಾಡುವ ಮೊದಲು ಹಾಗೂ ಲಾಕ್ಡೌನ್ ವೇಳೆಯಲ್ಲೂ ಎಲೆಕೋಸಿಗೆ ಉತ್ತಮ ಬೆಲೆ ಇತ್ತು. ಆದರೆ ಲಾಕ್ಡೌ ನ್ ಹಿನ್ನೆಲೆ ಬೆಳೆ ಖರೀದಿಸೋಕೆ ಮಧ್ಯವರ್ತಿಗಳು ಬರಲಿಲ್ಲ. ಬೇರೆ ಯಾರೂ ಖರೀದಿಗೆ ಮುಂದಾಗಿಲ್ಲ. ಇದರಿಂದ ಮನನೊಂದ ರೈತ ಎರಡು ಎಕರೆ ಎಲೆಕೋಸಿಗೂ ಟ್ರ್ಯಾಕ್ಟರ್ ಹೊಡೆಸಿದ್ದಾರೆ. ಜೊತೆಗೆ ಊರಿನ ಕುರಿ-ಮೇಕೆ, ದನ-ಕರುಗಳನ್ನು ಹೊಲದಲ್ಲೇ ಮೇಯಲು ಬಿಟ್ಟು, ಎಲೆಕೋಸನ್ನು ಕತ್ತರಿಸಿ ಹೊಲದಲ್ಲಿಯೇ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ಬೇಡಜಂಗಮ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ; ಬಿ.ಡಿ. ಹಿರೇಮಠ

ಬೇಡ ಜಂಗಮ ಜಾತಿ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ನಿಲ್ಲದು’ ಎಂದು ಬೇಡಜಂಗಮ ಸಂಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಡಿ.ಹಿರೇಮಠ ಎಚ್ಚರಿಸಿದರು.

6 ರಿಂದ 8ನೇ ತರಗತಿ ಶಾಲಾರಂಭದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ಕೋವಿಡ್ ನಂತರ ರಾಜ್ಯದಲ್ಲಿ ಫೆ.22 ರಿಂದ 6 ರಿಂದ 8ನೇ ತರಗತಿಯ ಪೂರ್ಣಾವಧಿ ಶಾಲೆ ಪ್ರಾರಂಭ ಮತ್ತು ವಿದ್ಯಾಗಮ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ 6 ತಿಂಗಳ ಕೋವಿಡ್ ರಿಸ್ಕ್ ಭತ್ಯೆ

ಬೆಂಗಳೂರು: ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಅಲೆಯಲ್ಲಿ ನೀಡಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಸರ್ಕಾರ ಕೋವಿಡ್ ರಿಸ್ಕ್ ಭತ್ಯೆಯನ್ನು ಆರು ತಿಂಗಳ ಕಾಲ ನೀಡಲು ಮುಂದಾಗಿದೆ.