ಧಾರವಾಡ: ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಕಲಚೇತನನಾಗಿದ್ದ ಉಮೇಶ್ ತ್ರಿಚಕ್ರ ಬೈಕ್ ಮೇಲೆ ಹೊರಟಿದ್ದ ಸಂದರ್ಭದಲ್ಲಿ ಬಂದ ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹತ್ತಿರವೇ ಇದ್ದ ಪತ್ನಿ ಜೋರಾಗಿ ಚೀರಾಡಿ ಜನರನ್ನು ಸೇರಿಸಲು ಪ್ರಯತ್ನಿಸಿದ್ದಾರೆ. ಇದನ್ನು ಕಂಡು ಓರ್ವ ಸುಮಾ ಅವರನ್ನು ಅಟ್ಟಿಸಿಕೊಂಡು ಬಂದಿದ್ದಾನೆ. ಆಗ ಪತ್ನಿ ಸುಮಾ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಮೃತ ಉಮೇಶ್ ಮೇಲೆ ಈ ಹಿಂದೆಯೂ ಕೂಡ ಹಲ್ಲೆಯಾಗಿತ್ತು. ಈ ಹಿನ್ನೆಲೆಯಲ್ಲಿ ಉಮೇಶ್ ತನ್ನ ಮನೆ ಹಾಗೂ ಮನೆ ಸುತ್ತ ಸಿಸಿಟಿವಿ ಅಳವಡಿಸಿದ್ದರು. ಇದೀಗ ಸಿಸಿಟಿವಿಯ ಮೂಲಕ ಅವರ ಕೊಲೆ ರಹಸ್ಯ ಬಯಲಾಗಿದೆ. ಈ ಕುರಿತು ಮೃತನ ಪತ್ನಿ ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹಳ್ಳಿ ಗಳಲ್ಲಿ ಕೊರೊನಾ ಭಯ..!: ಗುಟಕಾ, ಸಿಗರೇಟ್ ಮಾರಿದ್ರೆ ದಂಡ ಗ್ಯಾರಂಟಿ..!

ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ.…

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ಬ್ಯಾಂಕ್ ಗೆ ವಂಚನೆ

ಉತ್ತರಪ್ರಭ ಸುದ್ದಿ, ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ…

ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಒತ್ತಾಯ: ಲಂಬಾಣಿ ಸಮಾಜದ ಅಪ್ರಾಪ್ತ ಬಾಲಕಿ ಹತ್ಯೆಗೈದ ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುರಗಲವಾಡಿ ಗ್ರಾಮದಲ್ಲಿ ಗುಳೆಹೋದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಅತ್ಯಂತ ಖಂಡನಾರ್ಹ. ಲಂಬಾಣಿ ಸಮಾಜದವರು ಬಹಳಷ್ಟು ಸ್ವಾಭಿಮಾನಿಗಳು. ಆದರೆ ತುತ್ತಿನ ಚೀಲ ತುಂಬಿಕೊಳ್ಳಲು ಗುಳೆಹೋಗುವುದು ನಮಗೆ ಅನಿವಾರ್ಯವಾಗಿದೆ. ಆದರೆ ಗುಳೆಹೋದಂತಹ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ದುಷ್ಟರನ್ನು ಗಲ್ಲಿಗೇರಿಸಬೇಕು ಎಂದು ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಆಗ್ರಹಿಸಿದರು.

ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಸಿ.ಪಾಟೀಲ ನೀಡಿದ ಮಾಹಿತಿ

ಇಂದು ಸ್ವಾಂತಂತ್ರ್ಯ ದಿನಾಚರಣೆ ನಿಮಿತ್ಯ, ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ…