ಬೆಂಗಳೂರು: ಸಂದರ್ಭದ ಬಂಧಿಯಾಗಿ ಆಕೆ 3 ತಿಂಗಳು ಕಾಲ ತವರಲ್ಲೇ ಉಳಿಯಬೇಕಾಯಿತು. ಗಂಡ-ಮಗ ಬೆಂಗಳೂರಿನಲ್ಲಿ, ಆಕೆ ಚಂಡಿಗಢ್ ನಲ್ಲಿ. ಏನ್ ಜಗಳಾಡಿ ಹೋಗಿದ್ದರಾ? ಊಹೂಂ, ಸುಮ್ಮನೇ ವಾರದ ಮಟ್ಟಿಗೆ ಅಂತಾ ಹೋಗಿದ್ದರು.

ಯಾವ ಮುನ್ಸೂಚನೆ ನೀಡದೇ, ಜನರಿಗೆ ತಮ್ಮೂರಿಗೆ ತೆರಳುವ ಅವಕಾಶವನ್ನೂ ನೀಡದೇ ಏಕಾಏಕಿ ರಾತ್ರೋರಾತ್ರಿ ಲಾಕ್ ಡೌನ್ ಘೋಷಣೆಯಾದ ಪರಿಣಾಮ, ಯಾವ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಆಕೆಗೆ ತವರಿಂದ ಬೆಂಗಳೂರಿಗೆ ಬರಲಾಗಲಿಲ್ಲ.

ಅನ್-ಲಾಕ್ ನಂತರ ಸಂಚಾರ ಶುರುವಾದ ನಂತರ ಬೆಂಗಳೂರಿಗೆ ಬಂದರೆ ಪತಿರಾಯ ಬಾಗಲು ತೆಗೆಯುತ್ತಿಲ್ಲ. ಆಕೆಯ ಪಾಲಿಗೆ ಇದೊಂಥರಾ ಲಾಕ್ ಔಟ್! ನಗರದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಿದು.

ಮೂರು ತಿಂಗಳು ನಂತರ ಮಗನನ್ನು ನೋಡಲು ಬಂದ ಪತ್ನಿಯನ್ನು ಪತಿ ಮನೆಯ ಹೊರಗೆ ನಿಲ್ಲಿಸಿದ್ದಾನೆ. ಕೊನೆಗೆ ಮಹಿಳೆ ತಾನು 14 ದಿನ ಮನೆಯಲ್ಲಿ ನಿಮ್ಮಿಬ್ಬರಿಂದ ದೂರವಿದ್ದು ಕ್ವಾರಂಟೈನ್ ನಲ್ಲಿರುತ್ತೇನೆ, ಕೋವಿಡ್ ನೆಗೆಟಿವ್ ವರದಿ ಬಂದ ಬಳಿಕ ನಿಮ್ಮೊಂದಿಗೆ ಬೆರೆಯುತ್ತೇನೆ ಎಂದು ಕೇಳಿದರೂ ಪತಿ ಬಾಗಿಲು ತೆರೆದಿಲ್ಲ.

ಮಹಿಳೆ ವರ್ತೂರು ಠಾಣೆಯ ಪೊಲೀಸರನ್ನು ಸಂಪರ್ಕಿಸಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಪೊಲೀಸರು ಫೋನ್ ಮಾಡಿದರೆ, ಪತಿ ರಿಸೀವ್ ಮಾಡಿಲ್ಲ. ಕೊನೆಗೆ ಪೊಲೀಸರು ಬರಬಹುದೆಂದು ತಿಳಿದು ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ಪೊಲೀಸರು ಮಹಿಳೆಯನ್ನು ಆಕೆಯ ಸಂಬಂಧಿಕರ ಮನೆಯಲ್ಲಿರಿಸುವ ವ್ಯವಸ್ಥೆ ಮಾಡಿದ್ದಾರೆ.

ಲಾಕ್ ಡೌನ್ ಮತ್ತು ಕೊರೊನಾ ಈ ಎರಡೂ ಮಾಡಿದ ಎಡವಟ್ಟುಗಳು ಲಕ್ಷ ಲಕ್ಷ. ಈ ಪ್ರಕರಣದಲ್ಲಿ ಲಾಕ್ ಡೌನ್ ಮತ್ತು ಕೊರೋನಾ ತಾವು ಮಾತ್ರ ಜೋಡಿಯಾಗಿ, ಪತಿ-ಪತ್ನಿ ನಡುವೆ ಬಿರುಕು ಮೂಡಿಸಿವೆ.

Leave a Reply

Your email address will not be published. Required fields are marked *

You May Also Like

ಹ್ಯಾಂಡ್ ಸಾನಿಟೈಸರ್ ಸ್ಪೋಟವಾಗುವುದು ನಿಜನಾ..?

ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಸ್ವಯಂಪ್ರೇರಿತ ದಹನಕ್ಕೆ ಸಮರ್ಥವಾಗಿರುವುದಿಲ್ಲ ಎಂದು ತಿಳಿದುಬಂದಿದೆ.

ಕ್ರೀಡೆಗಳಿಂದ ಆರೋಗ್ಯಕರ ಭಾವನೆ

ಉತ್ತರಪ್ರಭ ಸುದ್ದಿನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ…

ಸ್ಥಳದಲ್ಲೇ ಪರೀಕ್ಷಿಸಿ ಸೋಂಕಿತರ ಸಂಖ್ಯೆ ಕಡಿಮೆಗೊಳಿಸಲು ಪ್ರಯತ್ನ ನಡೆದಿದೆ

ನರೇಗಲ್‌: ಕೊರೊನಾ ವೈರಸ್ ಪಟ್ಟಣದಿಂದ ಹಳ್ಳಿಯ ಕಡೆಗೆ ಗಣನೀಯವಾಗಿ ಹಬ್ಬಿದ್ದು, ಇದನ್ನು ತಡೆಗಟ್ಟಲು ಸರ್ಕಾರ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಉಪಯೋಗವನ್ನು ಕೊರೊನಾ ಸೋಂಕಿತರು ಪಡೆದುಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ:ಎ,ಡಿ,ಸಾಮುದ್ರಿ ಹೇಳಿದ

ಮಹಾಶಕ್ತಿ ಕೇಂದ್ರ ಅಧ್ಯಕ್ಷರಾಗಿ ನಾಗರಾಜ ಯಂಬಲದ ಆಯ್ಕೆ

ಮಸ್ಕಿ: ನಗರದ ಮಹಾಶಕ್ತಿ ಕೇಂದ್ರ ಅಧ್ಯಕ್ಷವನ್ನಾಗಿ ಆಯ್ಕೆಯಾದ ನಾಗರಾಜ ಯಂಬಲದ ಅವರಿಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿದರು.