ಮೈಸೂರು: ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ಮೃತ ಡಾ.ನಾಗೇಂದ್ರ ಅಂತಿಮ ದರ್ಶನ ಪಡೆದ ನಂತರ ಸಚಿವ ಡಾ.ಕೆ.ಸುಧಾಕರ್ ಪ್ರತಿಭಟನಾ ನಿರತ ವೈದ್ಯರ ಭೇಟಿ ವೇಳೆ ಮಹಿಳಾ ವೈದ್ಯೆಯೊಬ್ಬರು ಸಚಿವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವೈದ್ಯೆಯ ತರಾಟೆಗೆ ಸಚಿವ ಸುಧಾಕರ್ ಮಾತ್ರ ಮೌನಿಯಾಗಿದ್ದರು. ನಂಜನಗೂಡು ಟಿಹೆಚ್‌ಓ ಆತ್ಮಹತ್ಯೆ ಪ್ರಕರಣ ಖಂಡಿಸಿ ನಡೆದ ಪ್ರತಿಭಟನಾ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ವೇಳೆ ಈ ಘಟನೆ ನಡೆಯಿತು.  

Leave a Reply

Your email address will not be published. Required fields are marked *

You May Also Like

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.

ಉಗ್ರರಿಗೆ ಚಿಕಿತ್ಸೆ ನೀಡಲು, ಶಸ್ತ್ರಾಸ್ತ್ರ ಪೂರೈಸುವುದಕ್ಕಾಗಿಯೇ ಈತ ಮಾಡಿದ್ದೇನು?

ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಸಿಕ್ಕ ಸಿಕ್ಕವರಿಗೆ ಚಾಕು ಇರಿತ ನಾಲ್ವರು ಗಂಭೀರ, ಓರ್ವ ಸಾವು!

ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದೂ ಆರ್ಭಟಿಸಲಿದ್ದಾನೆ ಮಳೆರಾಯ – ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.