ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.

ಅಲ್ಲು ಅರ್ಜುನ್ ಅವರು ಪುಷ್ಫ ಸಿನಿಮಾದಲ್ಲಿ ಸದ್ಯ ಬ್ಯೂಸಿಯಾಗಿದ್ದಾರೆ. ಆದರೆ, ಕ್ಯಾರವಾನ್ ನಲ್ಲಿ ಅಲ್ಲು ಇರಲಿಲ್ಲ. ಅವರ ಮೇಕಪ್ ಟೀಂ ಮಾತ್ರ ಇತ್ತು. ವಾಹನವು ರಂಪಚೋದವರಂನಿಂದ ಹೈದರಾಬಾದ್ ಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ.

ಕ್ಯಾರವಾನ್ ನ ಚಾಲಕ ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಲಾರಿ ಗುದ್ದಿದೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಖಮ್ಮಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ನ್ನು ವಿಶೇಷವಾಗಿ ವಿನ್ಯಾಸಗೊಳಸಲಾಗಿತ್ತು. ಇದರ ಮೌಲ್ಯ ಸುಮಾರು ರೂ. 7 ಕೋಟಿ. ರೆಡ್ಡಿ ಕಸ್ಟಮ್ಸ್ ಎಂಬ ಕಂಪನಿ ಈ ವಾಹವನ್ನು ಡಿಸೈನ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ಪೊಲೀಸರಿಗೆ ಸಿಕ್ಕ ನಟ ಸುಶಾಂತ್ ಸಿಂಗ್ ಒಪ್ಪಂದಗಳ ಪ್ರತಿಗಳು!

ನವದೆಹಲಿ: ನಟ ಸುಶಾಂತ್ ಸಿಂಗ್ ಜೊತೆ ಒಪ್ಪಂದ ಮಾಡಿಕೊಂಡಿರುವ ಪ್ರತಿಗಳನ್ನು ಯಶ್ ರಾಜ್ ಫಿಲ್ಮ್ಸ್ (ವೈಆರ್…

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ಮಗು ಎತ್ತಿ ಹಿಡಿದ ತಕ್ಷಣ ಅಣ್ಣನೊಂದಿಗೆ ಇದ್ದಂತೆ ಆಯಿತು – ಧ್ರುವ!

ಬೆಂಗಳೂರು : ನನ್ನ ಅತ್ತಿಗೆಗೆ ಗಂಡು ಮಗು ಜನಿಸಿದ್ದು, ತುಂಬಾ ಸಂತಸ ನೀಡಿದೆ. ಮಗುವನ್ನು ಕೈಯಲ್ಲಿ ಹಿಡಿದಾಗ ನನ್ನ ಅಣ್ಣನೊಂದಿಗೆ ಇದ್ದೇನೆ ಎಂಬ ಭಾವ ಮೂಡಿತು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ.

ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ.