ಗದಗ: ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.
ಅವರು ಈ ಕುರಿತು ವಿಧಾನ ಪರಿಷತ್ತಿನಲ್ಲಿ ಸದನದ ಶೂನ್ಯ ಅವಧಿಯಲ್ಲಿ ಪ್ರಶ್ನಿಸಿ ಶೇ.70ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವುದನ್ನು ಸದನದ ಗಮನಕ್ಕೆ ತಂದರು. ಜಿಲ್ಲೆಯಲ್ಲಿ ಒಟ್ಟು 88 ಪಶು ಆಸ್ಪತ್ರೆಗಳು ಹಾಗೂ ಪಶು ಚಿಕಿತ್ಸಾಲಯಗಳು ಕಾರ್ಯನಿರ್ವಹಿಸುತ್ತಿವೆ.
ಈ ಆಸ್ಪತ್ರೆಗಳಿಗೆ ಒಟ್ಟು ಪಶು ವೈದ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿ ಒಟ್ಟು 384 ಹುದ್ದೆಗಳು ಮಂಜೂರಾಗಿದ್ದು, ಇದರಲ್ಲಿ 135 ಹುದ್ದೆ ಭರ್ತಿಯಾಗಿದ್ದು, 749 ಹುದ್ದೆಗಳು ಖಾಲಿ ಇರುತ್ತವೆ. ಪಶು ಆಸ್ಪತ್ರೆಗಳಲ್ಲಿ ಶೇ.70 ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ಜಾನುವಾರುಗಳಿಗೆ ಸಿಬ್ಬಂದಿ ಕೊರತೆಯಿಂದ ಸೂಕ್ತ ಚಿಕಿತ್ಸೆ ಲಭಿಸುತ್ತಿಲ್ಲ. ಇದರಿಂದಾಗಿ ಜಿಲ್ಲೆಯಲ್ಲಿ ಅನೇಕ ರೈತರು ತಮ್ಮ ಜಾನುವಾರುಗಳನ್ನು ಕಳೆದುಕೊಂಡಿರುವ ಘಟನೆಗಳು ನಡೆದಿವೆ.
ಪಶು ಸಂಗೋಪನಾ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆ ಇದ್ದರೂ ಕೂಡ ಪಶು ವೈದ್ಯರಾಗಿ ನೇಮಕಗೊಂಡ ವೈದ್ಯರುಗಳನ್ನು ಜಿಲ್ಲೆಯಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡಿದ್ದು ರೈತರ ಅಸಮದಾನಕ್ಕೆ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ನಿಯೋಜನೆಗೊಂಡAತಹ ಪಶು ವೈದ್ಯರನ್ನು ಪುನ: ಮಾತೃ ಇಲಾಖೆಗೆ ವಾಪಸ್ಸು ಕರೆಸಿಕೊಳ್ಳಲು ರೈತರು ಒತ್ತಾಯಿಸಿರುವರು.
ಒಟ್ಟಾರೆ, ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ, ಜಾನುವಾರು ಅಭಿವೃದ್ಧಿ ಅಧಿಕಾರಿಗಳ, ಪಶು ವೈದ್ಯಕೀಯ ಪರೀಕ್ಷಕರ ಮುಂತಾದ ಹುದ್ದೆಗಳನ್ನು ಸರ್ಕಾರ ಕೂಡಲೇ ತುಂಬಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಪಶು ವೈದ್ಯರನ್ನು ಮತ್ತೊಂದು ಇಲಾಖೆಗೆ ನಿಯೋಜನೆ ಮಾಡಿರುವುದನ್ನು ತಕ್ಷಣ ರದ್ದುಪಡಿಸಿ ಮಾತೃ ಇಲಾಖೆಗೆ ವಾಪಸ್ಸು ಕರೆಸಿಕೊಳ್ಳಲು ಕ್ರಮ ಜರುಗಿಸಲು ವಿಧಾನ ಪರಿಷತ್ ಸದಸ್ಯ ಸಂಕನೂರ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತೋಳದ ದಾಳಿಗೆ 15 ಕುರಿಗಳು ಬಲಿ

ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ…

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಕಳಸಾ-ಬಂಡೂರಿ: ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಹಣಕಾಸು ಅನುಮೋದನೆ ಯಾವಾಗ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.