The Latest
ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ
ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ
ಆಗಸ್ಟ್ ನಲ್ಲಿ ಚಿತ್ರೀಕರಣ
ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು.
ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ.
ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.