Browsing Tag
ಬೆಂಗಳೂರು
110 posts
ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಸಹಕಾರ ಬ್ಯಾಂಕ್ ಗಳ ಮೂಲಕ ರೈತರಿಗೆ 20,810 ಕೋಟಿ ಬೆಳೆ ಸಾಲ-ಸಚಿವ ಸೋಮಶೇಖರ್
ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.
ಸಮಸ್ಯೆಗಳ ಕುರಿತು ಪ್ರತ್ಯೇಕ ಸಾರಿಗೆ ಇಲಾಖೆಯ ಸಹಾಯವಾಣಿ : ಲಕ್ಷ್ಮಣ ಸವದಿ
ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಎರಡನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಯಾವಾಗ?: ಸಿಎಂ ಹೇಳಿದ್ದೇನು?
ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.
ರೈಲ್ವೇ ರೇಕ್ ಗಳಲ್ಲಿನ ರಸಗೊಬ್ಬರ ಚೀಲಗಳನ್ನು ಅನ್ಲೋಡ್ ಸಮಯ ವಿಸ್ತರಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳು ಲಾಕ್ಡೌನ್ ನಿಂದ ವಿನಾಯಿತಿ ನೀಡಿದ್ದರಿಂದ ಚುರುಕುಗೊಂಡಿವೆ. ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆಗೂ ಸರ್ಕಾರ ಅವಕಾಶ ಕಲ್ಪಿಸಿದ್ದು, ರೈಲ್ವೇ ರೇಕ್ ಗಳಲ್ಲಿ ತಂದಂತಹ ರಸಗೊಬ್ಬರ ಚೀಲಗಳನ್ನು ಅನ್ಲೋಡ್ ಅಥವಾ ಇಳಿಸಲು ಸರ್ಕಾರ ವಿಧಿಸಿರುವ ಸಮಯವನ್ನೀಗ ವಿಸ್ತರಿಸಿದೆ.
ಪ್ರೇಮಕಥೆಯ ಸಲಿಗೆ ಸಿಂಗಲ್ ಸಾಂಗ್ ಚಂದನ್ ಶೆಟ್ಟಿ ಡ್ಯಾನ್ಸ್
ಬೆಂಗಳೂರು: ಪ್ರೇಮಿಯೊಬ್ಬ ಪ್ರೀತಿಯಿಂದ ಆಗ ಬದಲಾವಣೆಯನ್ನು ಚಂದನ್ ಶೆಟ್ಟಿ ಲವ್ ಸಾಂಗ್ ಒಂದರಲ್ಲಿ ಬಿಂಬಿಸಿದ್ದಾರೆ. ಈ ಮೂಲಕ ಆಲ್ಬಂ ಸಾಂಗ್ ನಲ್ಲಿ ಚಂದನ್ ಶೆಟ್ಟಿ ಹೊಸ ಪ್ರಯೋಗ ಮಾಡಿದ್ದಾರೆ. ಸಲಿಗೆ ಹೆಸರಿನ ಸಿಂಗಲ್ ಆಲ್ಬಂ ಅನ್ನು ಚಂದನ್ ಶೆಟ್ಟಿ ಮೇ 28 ರಂದು ಬಿಡುಗಡೆ ಮಾಡಿದ್ದಾರೆ. ಕೆನಡಾದಲ್ಲಿ ಚಿತ್ರೀಕರಿಸಿದ ಹಾಡನ್ನು ತಾವೇ ಶೂಟ್ ಮಾಡಿದ್ದಲ್ಲದೇ ಚೆನ್ನಾಗಿ ನೃತ್ಯ ಮಾಡಿದ್ದಾರೆ ಚಂದನ್ ಶೆಟ್ಟಿ.
ಅಂಬರೀಷ್ 69ನೇ ಜನ್ಮದಿನ: ರೆಬೆಲ್ ಸ್ಟಾರ್ ನೆನಪು ಹಂಚಿಕೊಂಡ ದರ್ಶನ್-ಸುದೀಪ್
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ 69ನೇ ಜನ್ಮದಿನ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ ಕೊವಿಡ್ ಹಾವಳಿ ಹೆಚ್ಚಿರುವುದರಿಂದ ಸೋಶಿಯಲ್ ಮೀಡಿಯಾ ಮೂಲಕವೇ ಶುಭ ಕೋರಲಾಗುತ್ತಿದೆ. ಅಂಬರೀಷ್ ಜೊತೆ ಆಪ್ತ ಒಡನಾಟ ಹೊಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಕೂಡ ಸಾಮಾಜಿಕ ಜಾಲತಾಣದ ಮೂಲಕ ರೆಬಲ್ ಸ್ಟಾರ್ ಬರ್ತಡೇಗೆ ವಿಶ್ ಮಾಡಿದ್ದಾರೆ.
ಪ್ರಾಥಮಿಕ ಶಾಲೆ ಶಿಕ್ಷಕರು ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಗೆ ಅರ್ಹರಲ್ವಂತೆ..!
ಬೆಂಗಳೂರು: 1 -5 ನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಸಹ ಶಿಕ್ಷಕ ಗ್ರೇಡ್- 2 ಹುದ್ದೆಗಳಿಗೆ ಬಡ್ತಿ ಪಡೆಯಲು ಅರ್ಹರಲ್ಲ ಎಂದು ಆದೇಶಿಸಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರುಗಳಿಗೆ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೀಡಿದ್ದಲ್ಲಿ ಅದನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣ ಆದೇಶಿಸಿದೆ.